-
#SayCM ಹ್ಯಾಷ್ಟ್ಯಾಗ್ನಲ್ಲಿ ಕಾಂಗ್ರೆಸ್ ಪಕ್ಷದ ಸರಣಿ ಟ್ವೀಟ್
- ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸುವ ಹುನ್ನಾರವೇ ?
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಯ್ದ ಕೆಲವು ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಸ್ವೀಟ್ ಬಾಕ್ಸ್ ನೊಂದಿಗೆ ಲಕ್ಷಾಂತರ ರೂ. ಲಂಚ ನೀಡಿರುವ ಆರೋಪಕ್ಕೆ ಸಂಬಂಧಿಸಿಂತೆ ರಾಜ್ಯ ಕಾಂಗ್ರೆಸ್ ಪಕ್ಷವು ನ್ಯಾಯಾಂಗ ತನಿಖೆಗೆ ಆಗ್ರಹಿಸಿದೆ.
ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು.
ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ?
40% ಕಮಿಷನ್ ಆ ಹಣದ ಮೂಲವೇ?
ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ?@BSBommai ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ?#SayCM— Karnataka Congress (@INCKarnataka) October 28, 2022
“>
#SayCM ಹ್ಯಾಷ್ಟ್ಯಾಗ್ನಲ್ಲಿ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದೆ. “ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ? ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ? ಆ ಹಣದ ಮೂಲ ಯಾವುದು? ಎಷ್ಟು ಹಣ ಲಂಚವಾಗಿ ನೀಡಲಾಗಿದೆ, ಪಡೆದವರೆಷ್ಟು, ವಾಪಸ್ ನೀಡಿದವರೆಷ್ಟು ಎಂಬಿತ್ಯಾದಿ ಸಂಗತಿ ರಾಜ್ಯದ ಜನತೆಗೆ ತಿಳಿಯಬೇಕು” ಎಂದು ಆಗ್ರಹಿಸಿದೆ.
ನಾವು ಸುಮ್ಮನೇ @BSBommai ಅವರನ್ನು ಪೇ ಸಿಎಂ ಎಂದಿಲ್ಲ!
ಈ ಸರ್ಕಾರ ಲಂಚವನ್ನು ಪಡೆಯುತ್ತದೆ, ಲಂಚವನ್ನು ನೀಡುತ್ತದೆ!
ಇವೆಲ್ಲವೂ #PayCM ಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ!?ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾದ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ?#SayCM
— Karnataka Congress (@INCKarnataka) October 28, 2022
“>
“ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು” ಎಂದು ಕಾಂಗ್ರೆಸ್ ಒತ್ತಾಯಿಸಿದೆ.
“ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ? 40% ಕಮಿಷನ್ ಆ ಹಣದ ಮೂಲವೇ? ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ? ಬೊಮ್ಮಾಯಿಯವರೇ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ?” ಎಂದು ಸರಣಿ ಪ್ರಶ್ನೆಗಳನ್ನು ಕೇಳಲಾಗಿದೆ.
“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ! ಈ ಸರ್ಕಾರ ಲಂಚವನ್ನು ಪಡೆಯುತ್ತದೆ, ಲಂಚವನ್ನು ನೀಡುತ್ತದೆ! ಇವೆಲ್ಲವೂ #PayCM ಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ? ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ?” ಎಂದು ಖಾರವಾಗಿ ಪ್ರಶ್ನಿಸಿದೆ.