ಕನ್ನಡ ಸೇನೆ ಮಂಡ್ಯ ಜಿಲ್ಲಾ ಘಟಕದ ವತಿಯಿಂದ ಜು.2ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯನಗರದ ಗಾಂಧಿ ಭವನದಲ್ಲಿ ”ಪ್ರಸ್ತುತ ರಾಜಕೀಯದಲ್ಲಿ ಯುವಜನರ ಪಾತ್ರ” ಕುರಿತ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಹೆಚ್.ಸಿ.ಮಂಜುನಾಥ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ರಾಂತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಸಮಾರಂಭ ಉದ್ಘಾಟಿಸುವರು. ಮಾಜಿ ಸಚಿವ ಪಿ.ಜಿ.ಆರ್ ಸಿಂಧ್ಯಾ ವಿಚಾರ ಮಂಡನೆ ಮಾಡುವರು. ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಅಧ್ಯಕ್ಷತೆ ವಹಿಸುವರು. ಕನ್ನಡಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಉಪಸ್ಥಿತರಿರುವರು. ಜಿಲ್ಲಾಧ್ಯಕ್ಷ ಹೆಚ್.ಸಿ.ಮಂಜುನಾಥ್ ಪ್ರಾಸ್ತಾವಿಕ ನುಡಿ ನುಡಿಯುವರು ಎಂದರು.
ಅತಿಥಿಗಳಾಗಿ ಕನ್ನಡ ಸೇನೆ ರಾಜ್ಯ ಉಪಾಧ್ಯಕ್ಷ ಮುನಿರಾಜೇಗೌಡ, ರಾಜ್ಯ ಕಾರ್ಯಾಧ್ಯಕ್ಷ ಮುನಿಕೃಷ್ಣ ಹಾಗೂ ನಗರಸಭಾ ಸದಸ್ಯೆ ಸೌಭಾಗ್ಯ ಶಿವಲಿಂಗು ಭಾಗವಹಿಸುವರು ಎಂದರು.
ಗೋಷ್ಠಿಯಲ್ಲಿ ನಗರಸಭಾ ಸದಸ್ಯೆ ಸೌಭಾಗ್ಯ ಶಿವಲಿಂಗು, ಮುಖಂಡರಾದ ಮಹಾಂತಪ್ಪ, ಬೆಟ್ಟಹಳ್ಳಿ ಮಂಜುನಾಥ್, ಬಿ.ಸಿ.ಅನ್ನದಾನಿ, ಮಂಜುನಾಥ್ ಕಮ್ಮನಾಯಕನಹಳ್ಳಿ ಉಪಸ್ಥಿತರಿದ್ದರು.