Saturday, May 18, 2024

ಪ್ರಾಯೋಗಿಕ ಆವೃತ್ತಿ

ಟಿ ನರಸೀಪುರ| ಯುವತಿಯನ್ನು ಬಲಿ ತೆಗೆದುಕೊಂಡ ಚಿರತೆ

ಕಳೆದ ತಿಂಗಳಷ್ಟೇ ಚಿರತೆ ದಾಳಿಯಿಂದ ಎಂ.ಎಲ್.ಹುಂಡಿಯ ಯುವಕನೊಬ್ಬ ಸಾವನ್ನಪ್ಪಿದ್ದು, ಈಗ ಚಿರತೆ ಯುವತಿಯನ್ನು ಬಲಿ ಪಡೆದಿದೆ. ನಿರಂತರವಾಗಿ ಚಿರತೆ ದಾಳಿ ಮಾಡುತ್ತಿದ್ದರೂ ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಮತ್ತು ತಾಲೂಕು ಆಡಳಿತ ವಿಫಲತೆ ಕಂಡಿದೆ ಎಂದು ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಟಿ ನರಸಿಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ಮೇಘನಾ (22) ಚಿರತೆ ದಾಳಿಗೆ ಬಲಿಯಾದ ಯುವತಿ.  ಮನೆಯ ಪಕ್ಕದ ಹಿತ್ತಲಿಗೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.

ಶ್ರೀರಂಗಪಟ್ಟಣ ಕೆ.ಆರ್.ಎಸ್, ಹೀಗೆ ಮಂಡ್ಯದ ಜಿಲ್ಲೆಯಾದ್ಯಂತ ಈಗಾಗಲೇ ಹಲವು ಬಾರಿ ಜಾನುವಾರುಗಳನ್ನು ಬೇಟೆಯಾಡುತ್ತಿರು ಬಗ್ಗೆ ಮಾಧ್ಯಮಗಳು ಸುದ್ದಿ ಮಾಡಿವೆ. ಚಿರತೆಗಳನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆಯು ಹೆಚ್ಚಿನ ಹೊತ್ತು ಕೊಟ್ಟು ಜನಸಾಮಾನ್ಯರ ಪ್ರಾಣಕ್ಕೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!