Thursday, September 19, 2024

ಪ್ರಾಯೋಗಿಕ ಆವೃತ್ತಿ

ತಹಶೀಲ್ದಾರ್ ವಿರುದ್ಧ ವಿವಿಧ ಸಂಘಟನೆಗಳ ಪ್ರತಿಭಟನೆ

ಪತ್ರಕರ್ತರು ಹಾಗೂ ಆರ್’ಟಿಐ ಕಾರ್ಯಕರ್ತನ ಮೇಲೆ ದೂರು ದಾಖಲಿಸಿರುವ ಮಂಡ್ಯ ತಹಶೀಲ್ದಾರ್ ವಿರುದ್ದ ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ‌ ನಡೆಸಿದವು.

ಶುಕ್ರವಾರ ಮಧ್ಯಾಹ್ನ ಮಂಡ್ಯನಗರದ ಕಾವೇರಿ ವನದ ಬಳಿಯಿಂದ ಮೆರವಣಿಗೆ ಮೂಲಕ ಡಿಸಿ ಕಚೇರಿಗೆ ಆಗಮಿಸಿದ ಮಖಂಡರು, ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.
ಅಕ್ರಮಗಳನ್ನು ಬಯಲಿಗೆಳೆಯುವ ಮಾಹಿತಿ ಹಕ್ಕು ಕಾರ್ಯಕರ್ತರು ಹಾಗೂ ಪತ್ರಕರ್ತರ ಮೇಲೆ ತಹಶೀಲ್ದಾರ್ ಕುಂಞ ಅಹಮದ್ ಅವರು, ಸುಳ್ಳು ದೂರು ದಾಖಲಿಸಿ ದಮನಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಪ್ರಕರಣ ಕುರಿತಂತೆ ಜಿಲ್ಲಾಧಿಕಾರಿಗಳು ವಸ್ತುನಿಷ್ಠ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ‌ ಜಿಲ್ಲಾಧಿಕಾರಿ, ಈ ಕುರಿತು ವರದಿ ತರಿಸಿಕೊಂಡು ಮುಂದಿನ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ರೈತಸಂಘದ‌ ಜಿಲ್ಲಾಧ್ಯಕ್ಷ ಕೆಂಪೂಗೌಡ, ಮುಖಂಡರಾದ ಮಧುಚಂದನ್, ಪ್ರಸನ್ನಗೌಡ, ಕೆಆರ್’ಎಸ್ ಪಕ್ಷದ ವೆಂಕಟೇಶ್, ಕೋಣನಹಳ್ಳಿ ಹನುಮಂತು, ಕಲ್ಲಹಳ್ಳಿ ರವೀಂದ್ರ ಸೇರಿದಂತೆ ಮೊದಲಾದವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!