Thursday, September 19, 2024

ಪ್ರಾಯೋಗಿಕ ಆವೃತ್ತಿ

ಶಿಕ್ಷಕರ ದಿನಾಚರಣೆ ಗುರುಗಳಿಗೆ ಅಭಿನಂದನೆ

ಮಂಡ್ಯ ಅಮೃತ ಲಯನ್ಸ್ ಸಂಸ್ಥೆ, ನಿವೃತ್ತ ಶಿಕ್ಷಕ ಕೆ.ಮಾಯಿಗಶೆಟ್ಟಿ ಸೇವಾ ಸಮಿತಿ ಇವರ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರಿಗೆ ಅಭಿನಂದನೆ ಹಾಗೂ ಇಂಜಿನಿಯರ್ ದಿನಾಚರಣೆ ಕಾರ‍್ಯಕ್ರಮ ನಗರದ ಮಾಜಿ ಪುರಸಭಾ ಪ್ರೌಢಶಾಲಾ ಆವರಣದಲ್ಲಿ ನಡೆಯಿತು.

ಲಯನ್ಸ್ ಮಲ್ಟಿಪಲ್ ಕೌನ್ಸಿಲ್ ಮಾಜಿ ಅಧ್ಯಕ್ಷ ಡಾ.ನಾಗರಾಜ ವಿ.ಬಾಯರಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಸರ್ವಪಲ್ಲಿ ರಾಧಾಕೃಷ್ಣ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಅವರ ಬಗ್ಗೆ ಮಕ್ಕಳಿಗೆ ತಿಳಿಸಿಕೊಡುವ ಅಗತ್ಯತೆ ಇದೆ.

ಈ ಇಬ್ಬರು ಮಹನೀಯರು ಸಾಧನೆ ಮಾಡಿದವರು. ಮಕ್ಕಳಿಗೆ ಇವರ ಬಗ್ಗೆ ತಿಳಿಕೊಡುವ ಮೂಲಕ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಲು ಸಾಧ್ಯವಾಗುತ್ತದೆ, ಜೊತೆಗೆ ಮಕ್ಕಳಿಂದ ಹೆಚ್ಚಿನ ಕಾರ್ಯ ಮಾಡಲು ಮುಂದಿನ ದಿನಗಳಲ್ಲಿ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಇಂಜಿನಿಯರ್ ಎಚ್.ಶ್ರೀನಿವಾಸಗೌಡ, ಶಿಕ್ಷಕರಾದ ನಂದಿನಿ, ನಾಗರಾಜು, ಡಿ.ಎನ್. ವೆಂಕಟೇಗೌಡ, ಪಿ.ಸುಶೀಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜವರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಕಾಂತ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಎಚ್.ಸಿ.ಶಿವಲಿಂಗೇಗೌಡ, ಅಮೃತ ಲಯನ್ಸ್ ಅಧ್ಯಕ್ಷ ಎಂ.ಲೋಕೇಶ್, ಮುಖ್ಯಶಿಕ್ಷಕ ಮಲ್ಲಿಕಾರ್ಜುನಯ್ಯ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!