Thursday, September 19, 2024

ಪ್ರಾಯೋಗಿಕ ಆವೃತ್ತಿ

ದೇವಾಲಯ ಜೀರ್ಣೋದ್ಧಾರ ಕಾರ್ಯಕ್ಕೆ ಪುಟ್ಟರಾಜು ಚಾಲನೆ

ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಪುರದಕೊಪ್ಪಲು ಗ್ರಾಮದಲ್ಲಿ ಶ್ರೀಶಿವಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಮೇಲುಕೋಟೆ  ಶಾಸಕ ಸಿ.ಎಸ್.ಪುಟ್ಟರಾಜು ಇಂದು ಗುದ್ದಲಿ ಪೂಜೆ ಮಾಡಿದರು.

ಐತಿಹಾಸಿ 70 ವರ್ಷದಷ್ಟು ಹಳೆಯಾದ ದೇವಸ್ಥಾನವನ್ನು ತೆರವುಗೊಳಿಸಿ ನೂತನ ದೇವಾಲಯ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ, ಈ ಸಂದರ್ಭದಲ್ಲಿ ಶಾಸಕ ಸಿ.ಎಸ್.ಪುಟ್ಟರಾಜ ಅವರು ಎತ್ತಿನ ಗಾಡಿಯನ್ನು ಓಡಿಸಿಕೊಂಡು ಹೋಗುವ ಮೂಲಕ ಗಮನ ಸೆಳೆದರು.

ಗ್ರಾಮದ ಮಾರಮ್ಮನ ದೇವಸ್ಥಾನದಿಂದ ಊರಿನ ಜನರು ಮೀಸಲು ನೀರನ್ನು ಹೊತ್ತು ಶ್ರೀ ಶಿವಲಿಂಗೇಶ್ವರ ದೇವಸ್ಥಾನದ ಬಳಿಗೆ ತಮಟೆ ನಗರಿ ಮೂಲಕ ಆಗಮಿಸಿದರು. ಈ ಸಂದರ್ಭದಲ್ಲಿ ಮನ್ ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರ, ಮುದಗಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಶಂಕರಗೌಡ, ಪ್ರಥಮ ದರ್ಜೆ ಗುತ್ತಿಗೆದಾರರು ಬಾಲ ಚಂದ್ರು, ಸಮಾಜ ಸೇವಕರು ಸುರೇಶ, ಯೋಗೇಶ್, ಸುನೀಲ್ ಮತ್ತು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!