ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ತಿರುಮಲಾಪುರ ಗ್ರಾಮದ ಶ್ರೀ ಹಳೇ ಊರಮ್ಮ ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಶ್ರೀ ಶಂಭು ಸೇವಾ ಟ್ರಸ್ಟ್ ಮತ್ತು ಮನ್ಮುಲ್ ಅಧ್ಯಕ್ಷ ಬಿ.ಆರ್ ರಾಮಚಂದ್ರು ರವರು ಸಹಾಯಾರ್ಥವಾಗಿ 25,000 ರೂ. ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ರಾಮಚಂದ್ರು, ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ನೀಡುವ ಮೂಲಕ ದೇವರ ಆಶೀರ್ವಾದ ಪಡೆದಿದ್ದೇನೆ.ದೇವಸ್ಥಾನದ ಅಭಿವೃದ್ಧಿಗೆ ಸದಾ ಸ್ಪಂದಿಸುತ್ತೇನೆ ಎಂದು ತಿಳಿಸಿದರು.
ರಾಮಚಂದ್ರು ಅವರಿಗೆ ತಿರುಮಲಾಪುರ ಗ್ರಾಮಸ್ಥರು ಧನ್ಯವಾದ ತಿಳಿಸಿದರು.ಈ ಸಂದರ್ಭದಲ್ಲಿ ಟ್ರಸ್ಟ್ ನ ಕಾರ್ಯದರ್ಶಿ ಬಿ.ಆರ್ ಸುರೇಶ್, ಸುಗಂಧರಾಜು, ಆನಂದ್ , ಶಂಭು ಜವರೇಗೌಡ, ಹಾಗೂ ಯುವಕರು , ಊರಿನ ಗ್ರಾಮಸ್ಥರು ಮತ್ತಿತರು ಉಪಸ್ಥಿತರಿದ್ದರು.