Thursday, September 19, 2024

ಪ್ರಾಯೋಗಿಕ ಆವೃತ್ತಿ

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಕಾರು ಪಲ್ಟಿ – ಇಬ್ಬರು ಗಾಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿ ತೆರಳುತ್ತಿದ್ದ ಕಾರೊಂದು ಪಲ್ಟಿಯಾಗಿ, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಬಳಿ ನಡೆದಿದೆ.

ಮೈಸೂರಿನ ನಾಲ್ವರು ಯುವಕರು ಕಾರಿನಲ್ಲಿ ತೆರಳುತ್ತಿದ್ದರು. ಎಕ್ಸ್‌ಪ್ರೆಸ್‌ನ ಸರ್ವೀಸ್‌ ರಸ್ತೆಯಲ್ಲಿ ತೆರಳುವಾಗ ಎದುರಾದ ಹಂಪ್‌ ಕಂಡು ಚಾಲಕ ತಕ್ಷಣ ಬ್ರೇಕ್‌ ಹಾಕಿದ್ದಾರೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು, ಪಲ್ಟಿಯಾಗಿದೆ.

ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೈಸೂರಿನ ಹೇಮಂತ್ ಹಾಗೂ ಲೋಕೇಶ್ ಗಾಯಗೊಂಡಿದ್ದಾರೆ. ಇನ್ನಿಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳದ ಸಮೀಪವಿದ್ದ ಸ್ಥಳೀಯರು ಗಾಯಾಳುಗಳನ್ನು ಕಾರಿನಿಂದ ಹೊರ ತಂದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ರಸ್ತೆಯಲ್ಲಿ ಹಂಪ್‌ ಇರುವ ಬಗ್ಗೆ ಸೂಚನಾ ಫಲಕ ಹಾಕದೇ ಇರುವುದು ಘಟನೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!