Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಾಲದ ಬಾಧೆ : ರೈತ ನೇಣಿಗೆ ಶರಣು

ಪಾಂಡವಪುರ ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ರೈತನೊಬ್ಬ ನೇಣಿಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ.

ಗ್ರಾಮದ ಲೇಟ್ ಮಹದೇವೇಗೌಡ ಅವರ ಪುತ್ರ ಕೆ.ಎಂ.ವಿಶ್ವನಾಥ್ ನೇಣಿಗೆ ಆತ್ಮಹತ್ಯೆ ಮಾಡಿಕೊಂಡಿರುವ ರೈತ. ತನ್ನ ತೋಟದಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ನೇಣು ಬಿಗಿದುಕೊಂಡಿದ್ದಾರೆ.

2 ಎಕರೆ ಜಮೀನು ಮತ್ತು ತೋಟವನ್ನು ಹೊಂದಿರುವ ರೈತ ವಿಶ್ವನಾಥ್ ಸಹಕಾರ ಬ್ಯಾಂಕ್ , ಖಾಸಗಿ ಸಂಸ್ಥೆ ಹಾಗೂ ಖಾಸಗಿ ವ್ಯಕ್ತಿಗಳಿಂದ ಸುಮಾರು ರೂ.4 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮೃತರಿಗೆ ಪತ್ನಿ ಇದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!