ಸಮಗ್ರ ಕರ್ನಾಟಕ, ಕನ್ನಡ ಮತ್ತು ಕನ್ನಡಿಗರ ಸಂರಕ್ಷಣೆಗಾಗಿ ರಾಜ್ಯಾದ್ಯಂತ ಚಳವಳಿ ನಡೆಸಲಾಗುವುದು ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಹೇಳಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡಿಗ ಉದ್ಯೋಗಕ್ಕಾಗಿ ಡಾ.ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು. ಕನ್ನಡಿಗೆ ಮೇಲೆ ಹಿಂದಿ ಹೇರಿಕೆಯನ್ನು ನಿಲ್ಲಿಸಿ, ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೊಳಿಸಬೇಕು. ರೈತರು ಬೆಳೆದ ಬೆಳೆಗಾಗಿ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಹಾಗೂ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿದರು.
ರಾಜ್ಯದ ನಂದಿನಿಯೊಂದಿಗೆ ಗುಜರಾತ್ ನ ಅಮೂಲ್ ವೀಲಿನ ಪ್ರಸ್ತಾಪವನ್ನು ಕೈ ಬಿಡಬೇಕು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಂದಿನಿ ಉತ್ಪನ್ನಗಳೇ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವಂತೆ ನೋಡಿಕೊಳ್ಳಬೇಕೆಂದರು.
ಗೋಷ್ಠಿಯಲ್ಲಿ ಸೈನ್ಯದ ಮುಖಂಡರಾದ ಶಿವಕುಮಾರ್, ಆರಾಧ್ಯ, ರಾಮಣ್ಣ, ಉಮ್ಮಡಹಳ್ಳಿ ನಾಗೇಶ್ ಉಪಸ್ಥಿತರಿದ್ದರು.