Thursday, September 19, 2024

ಪ್ರಾಯೋಗಿಕ ಆವೃತ್ತಿ

ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿಯ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 10 ಲಕ್ಷ ಪರಿಹಾರ ಘೋಷಿಸಿದರು.

ಕೆ.ಆರ್.ಪೇಟೆ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಶ್ರೀ ಮಲೆ ಮಹದೇಶ್ವರ ಕುಂಭಮೇಳದ ಸಮಾರೋಪ ಸಮಾರಂಭದಲ್ಲಿ 10 ಲಕ್ಷ ಪರಿಹಾರ ಘೋಷಿಸಿದರು.

ಮಳವಳ್ಳಿ ಘಟನೆ ಬಗ್ಗೆ ಎಲ್ಲರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಎಂದಿಗೂ ಇಂಥದ್ದು ನಡೆಯಬಾರದು. ಅತ್ಯಂತ ಅಮಾನುಷ ಕೃತ್ಯ ಇದಾಗಿದ್ದು, ಮನುಷ್ಯತ್ವವಿಲ್ಲದವರು ಮಾತ್ರ ಇಂಥ ಕೆಲಸ ಮಾಡಲು ಸಾಧ್ಯ.

ಇದನ್ನು ಶಬ್ದಗಳಲ್ಲಿ ಖಂಡಿಸಲಾಗದು. ಏನೂ ಅರಿಯದ ಕಂದಮ್ಮನ ಪರಿಸ್ಥಿತಿ ಕೇಳಿದರೆ ಕರಳು ಕಿವುಚಿ ಬರುತ್ತದೆ. ಈಗಾಗಲೇ ಅಧಿಕಾರಿಗಳು ಕ್ರಮ ತೆಗೆದುಕೊಂಡು ಅಪರಾಧಿಯನ್ನು ಬಂಧಿಸಲಾಗಿದೆ. 302, 307, ಪೋಕ್ಸೋ ಸೆಕ್ಷನ್ ಗಳನ್ನು ಹಾಕಿದ್ದಾರೆ. ನಮ್ಮ ಪೊಲೀಸ್ ಮಹಾನಿರ್ದೇಶಕರಿಗೆ ಅಂದೇ ಸೂಚನೆ ನೀಡಿ ಕೂಡಲೇ ತನಿಖೆಯಾಗಿ ತಪ್ಪಿ ತಸ್ಥರನ್ನು ಶಿಕ್ಷೆಗೊಳಪಡಿಸಬೇಕೆಂದು ಸೂಚಿಸಿದ್ದೆ.

ಅವರು ಎಫ್.ಎಸ್.ಎಲ್ ವರದಿ ಒಂದು ವಾರದಲ್ಲಿಯೇ ನೀಡಲಾಗುವುದೆಂದು ಹೇಳಿದ್ದು, ಬಂದ ಕೂಡಲೇ ಆರೋಪ ಪಟ್ಟಿ ಸಿದ್ಧಪಡಿಸಿ ಪೋಕ್ಸೋ ನ್ಯಾಯಾಲಯಕ್ಕೆ ಕಳುಹಿಸಿ, ಆದಷ್ಟು ಬೇಗ ನ್ಯಾಯ ನೀಡಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!