Tuesday, May 14, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ | ಆಂಬುಲೆನ್ಸ್ ವಾಹನ ತಡೆದ ವಿಡಿಯೋ ವೈರಲ್

ನಾಗಮಂಗಲ ಇತ್ತಿಚೇಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಹಾಗೂ ನಿರ್ವಾಹಕ ಜಗದೀಶ್ ಅವರನ್ನು ರಾತ್ರಿ ವೇಳೆ ಬಿಜಿಎಸ್ ಆಸ್ಪತ್ರೆಯಿಂದ  ಹೆಚ್ಚುವರಿ ಚಿಕಿತ್ಸೆಗೆ ಮೈಸೂರಿನ ಕೊಲಂಬಿಯಾ ಆಸ್ಪತ್ರೆಗೆ ಆಂಬುಲೆನ್ಸ್ ವಾಹನದಲ್ಲಿ ಕರೆಯೊಯ್ಯುತ್ತಿದ್ದ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಸುರೇಶ್ ಗೌಡ ಹಾಗೂ ಅವರ ಬೆಂಬಲಿಗರು ಆ ವಾಹನವನ್ನು ತಡೆದಿದ್ದಾರೆಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಪರ ವಿರೋಧದ ಚರ್ಚೆಗಳು ನಡೆಯುತ್ತಿವೆ.

ಜಗದೀಶ್ ಅವರನ್ನು ಕುಟುಂಬಸ್ಥರು ಮೈಸೂರಿಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ನಾಗಮಂಗಲ ಪಟ್ಟಣದ ಟಿ.ಬಿ. ಬಡಾವಣೆ ಸರ್ಕಲ್ ಬಳಿ ಮಾಜಿ ಶಾಸಕ ಸುರೇಶ್ ಗೌಡ ಹಾಗೂ ಅವರ ಬೆಂಬಲಿಗರು ರಸ್ತೆ ಮಧ್ಯೆ ತಡೆದು ಚಿಕಿತ್ಸೆಗೆ ವಿಳಂಬ ಮಾಡಿರುವ ದೃಶ್ಯಾವಳಿಗಳು ಪುರಸಭೆ ಹಾಗೂ ಪೊಲೀಸ್ ಇಲಾಖೆ ಮೂಲಕ ಟಿ.ಬಿ. ಬಡಾವಣೆಯ ಬಿಜಿಎಸ್ ಸರ್ಕಲ್ ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬುದು ಸಚಿವ ಚಲುವರಾಯಸ್ವಾಮಿ ಅವರ ಬೆಂಬಲಿಗರ ಆರೋಪವಾಗಿದೆ.

ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸುರೇಶ್ ಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಅಂಬುಲೆನ್ಸ್ ವಾಹನವನ್ನು ತಡೆದಿರುವ ಬಗ್ಗೆ ಜಗದೀಶ್ ಕುಟುಂಬದ ಯಾರಾದರೂ ಒಬ್ಬರು ಹೇಳಿಕೆ ನೀಡಿದರೆ, ನಾನು ರಾಜಕೀಯ ನಿವೃತ್ತ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!