Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ದೇವಾಲಯದ ಹುಂಡಿಯಲ್ಲಿದ್ದ ₹1.50 ಲಕ್ಷ ದೋಚಿದ ಕಳ್ಳರು

ಮಂಡ್ಯದ ಗಾಂಧಿನಗರದ ಕಾಳಮ್ಮ ದೇವಾಲಯದ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಲಕ್ಷಾಂತರ ರೂ ಹಣವನ್ನು ದೋಚಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ದೇವಾಲಯದಲ್ಲಿ ಹುಂಡಿಯಲ್ಲಿದ್ದ ಸುಮಾರು ₹1.50 ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳರು ದೋಚಿದ್ದಾರೆ. ಮಧ್ಯರಾತ್ರಿ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ದೇವಾಲಯದ ಪ್ರಾಂಗಣದಲ್ಲಿದ್ದ ಹುಂಡಿಯನ್ನು ಪಕ್ಕಕ್ಕೆ ಹೊತ್ಯೋಯ್ದು ಹೊಡೆದು ಹಾಕಿ ಅದರಲ್ಲಿದ್ದ ಹಣವನ್ನು ದೋಚಿದ್ದಾರೆ. ಹುಂಡಿಯಲ್ಲಿದ್ದ ನಾಣ್ಯಗಳನ್ನು ಅಲ್ಲೇ ಬಿಟ್ಟಿದ್ದು, ಇನ್ನುಳಿದ ನೋಟುಗಳನ್ನೆಲ್ಲ ಕದ್ದೊಯ್ದಿದ್ದಾರೆ.

ಇಂದು ಬೆಳ್ಳಿಗ್ಗೆ ಭಕ್ತರು ಹೋದ ವೇಳೆ ದೇವಾಲಯದ ಬಾಗಿಲ ಬೀಗ ಮುರಿದಿರುವುದು ಕಂಡುಬಂದಿದ್ದು. ಪರಿಶೀಲಿಸಿದಾಗ ಹುಂಡಿ ದೋಚಿರುವುದು ಕಂಡು ಬಂದಿದೆ.

ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!