ಮಂಡ್ಯನಗರದ ಮಹಿಳಾ ಸರ್ಕಾರಿ ಕಾಲೇಜಿ(ಸ್ವಯತ್ತ)ನ ಕ್ರೀಡಾ ವಿದ್ಯಾರ್ಥಿನಿಯರು ಥ್ರೋಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ವಿಶ್ವವಿದ್ಯಾನಿಲಯದ ಅಂತರವಲಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಮಂಡ್ಯನಗರದ ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಮೈಸೂರು ವಿಶ್ವವಿದ್ಯಾನಿಲಯ ಮಾಂಡವ್ಯ ವಲಯ ಮಟ್ಟದ ಅಂತರ ಕಾಲೇಜುಗಳ ಮಹಿಳಾ ಥೋಬಾಲ್ ಪಂದ್ಯಾವಳಿಯಲ್ಲಿ ಕ್ರೀಡಾ ವಿದ್ಯಾರ್ಥಿನಿಯರು, ಉತ್ತಮ ಸಾಧನೆ ಮಾಡಿ, ಮಹಿಳಾ ಸರ್ಕಾರಿ ಕಾಲೇಜಿಗೆ ಕೀರ್ತೀ ತಂದಿದ್ದಾರೆ ಎಂದು ಪ್ರಾಂಶುಪಾಲ ಆರ್.ದಶರಥ ಅಭಿನಂದಿಸಿದ್ದಾರೆ.
ಇದೇ ಸಂದರ್ಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಕೆ.ಆರ್.ಲೋಕೇಶ್, ಕ್ರೀಡಾ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಕಾಲೇಜಿನ ಬೋಧಕ ಬೋಧಕೇತರ ವರ್ಗದವರು ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.