Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸಾಲಬಾಧೆಯಿಂದ ಬೇಸತ್ತು ರೈತ ಆತ್ಮಹತ್ಯೆ

ಸಾಲಬಾಧೆಯಿಂದ ಬೇಸತ್ತು ರೈತ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ತಾಲೂಕಿನ ಬಿಳಿದೇಗಲು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಿ.ಸಿ.ಸ್ವಾಮಿ(48) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ರೈತನು ಟ್ರ್ಯಾಕ್ಟರ್ ಸಾಲ, ಬೆಳೆ ಸಾಲ, ಕೈ ಸಾಲ ಸೇರಿದಂತೆ ಹತ್ತು ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ, ಇದಲ್ಲದೇ ಇತ್ತೀಚೆಗೆ ಆಲೆಮನೆ ಬೆಂಕಿಗಾಹುತಿಯಾಗಿ ನಷ್ಟವಾಗಿತ್ತು.

ಎರಡು ಎಕರೆ ಜಮೀನು ಹೊಂದಿದ್ದ ಸ್ವಾಮಿ, ಯಾವುದೇ ಬೆಳೆ ಇಲ್ಲದೇ ನಷ್ಟಕ್ಕೆ ಒಳಗಾಗಿದ್ದ, ಇದರಿಂದ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!