Thursday, September 19, 2024

ಪ್ರಾಯೋಗಿಕ ಆವೃತ್ತಿ

ಇಂದು ಎಸ್.ಎಂ.ಕೃಷ್ಣರಿಗೆ ಜನ್ಮದಿನ

ಶುಭಾಶಯ ಕೋರಿದ ಚಲುವರಾಯಸ್ವಾಮಿ,ದಿನೇಶ್ ಗೂಳೀಗೌಡ

ಇಂದು ಮಂಡ್ಯ ಜಿಲ್ಲೆಯ ಹೆಮ್ಮೆಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರು ಜನ್ಮದಿನ. ಅವರ ಜನ್ಮದಿನದ ಪ್ರಯುಕ್ತ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಎನ್. ಚಲುವರಾಯಸ್ವಾಮಿ,ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ರವರು, ಯುವ ಕಾಂಗ್ರೆಸ್ ಮುಖಂಡ ರಘುವೀರ್ ಗೌಡ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಜನ್ಮದಿನದ ಶುಭಾಶಯ ಕೋರಿದರು.

ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ಗೌರವ ಹೊಂದಿರುವ ಎಸ್.ಎಂ.ಕೃಷ್ಣರವರು ತಾವು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜನಪರ ಆಡಳಿತ ನೀಡಿದ್ದಾರೆ.

ಅವರ ಮಾರ್ಗದರ್ಶನ,ಆಶೀರ್ವಾದ ನಮಗೆ ಬೇಕು.ಅವರಿಗೆ ದೇವರು ಆರೋಗ್ಯ ಭಾಗ್ಯ ನೀಡಲಿ ಎಂದು ಚಲುವರಾಯ ಸ್ವಾಮಿ, ದಿನೇಶ್ ಗೂಳೀಗೌಡ ಶುಭ ಕೋರಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!