Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಸಂಘಟನೆಗೆ ಹೆಚ್ಚು ಒತ್ತು ನೀಡಿ

ಶ್ರೀರಂಗಪಟ್ಟಣ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯಲ್ಲಿ ಚರ್ಚೆ

ಮುಂಬರುವ ವಿಧಾನ ಸಭೆ ಚುನಾವಣೆ ಒಳಗೆ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಈಗಿನಿಂದಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಬೇಕೆಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಐಶ್ವರ್ಯ ಮಹದೇವ್ ಹೇಳಿದರು.

ಶ್ರೀರಂಗಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ತಾಲೂಕು ಯುವ ಕಾಂಗ್ರೆಸ್ ನ ಮಾಸಿಕ ಸಭೆಯಲ್ಲಿ ಪಕ್ಷದ ಸಂಘಟನೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದರು.

ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಗೆ ಹತ್ತು ತಿಂಗಳಿದ್ದು, ಪಕ್ಷ ಸಂಘಟನೆಯಲ್ಲಿ ಯುವಕರ ಪಾತ್ರ ಮಹತ್ವವಾಗಿದ್ದು,ಪ್ರತಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಭೇಟಿಯಾಗಿ, ಆಯಾ ಬೂತ್‌ಗಳಲ್ಲಿ ಅವರಿಗೆ ಜವಾಬ್ದಾರಿ ವಹಿಸಿ ಸಂಘಟಿಸಬೇಕು ಎಂದರು. ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಪಕ್ಷದ ಸಂಘಟನೆ ಹಾಗು ಇಲ್ಲಿವರೆಗೆ ನಡೆಸಿರುವ ನೊಂದಣಿ ಕುರಿತು ಮಾತನಾಡಿದರು.

ಶ್ರೀರಂಗಪಟ್ಟಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್.ಎಸ್ , ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ,ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ಗುಣವಂತ, ಶ್ರೀಧರ್, ಹಿತೇಶ್, ಹಾಗೂ ಯುವ ಕಾಂಗ್ರೆಸ್ ನ ಎಲ್ಲಾ ಪದಾಧಿಕಾರಿಗಳು ಭಾಗಿಯಾಗಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!