Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಳೆ ನಾಲ್ವಡಿ ನೆನಪೋತ್ಸವ : ಕನ್ನಡ ರಾಜ್ಯೋತ್ಸವ

ನಾಲ್ವಡಿ ಕೃಷ್ಣರಾಜ ಒಡೆಯರ್ ಟ್ರಸ್ಟ್ ವತಿಯಿಂದ ಜಿ.ಪಂ.ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್ ನೇತೃತ್ವದಲ್ಲಿ ನಾಲ್ವಡಿ ಅವರ ನೆನಪೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನ.29ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ತಾಲ್ಲೂಕಿನ ಕೊತ್ತತ್ತಿ ಗ್ರಾಮದ ಶ್ರೀರಾಮಮಂದಿರ ಆವರಣದಲ್ಲಿ ನಡೆಯಲಿದೆ.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವಮಾನವ ಕ್ಷೇತ್ರದ ಪುರುಷೋತ್ತಮನಂದನಾಥ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸಮಾರಂಭ ಉದ್ಘಾಟಿಸುವರು. ಕರ್ನಾಟಕ ಸಂಘದ ಜಯಪ್ರಕಾಶ್‌ಗೌಡ ಅಧ್ಯಕ್ಷತೆ ವಹಿಸುವರು. ಜಿ.ಪಂ.ಸಿಇಓ ಶಾಂತ ಹುಲ್ಮನಿ ಕನ್ನಡ ಧ್ವಜಾರೋಹಣ ನೆರವೇರಿಸುವರು. ತಹಶೀಲ್ದಾರ್ ಕುಂಞ ಅಹಮದ್ ಸನ್ಮಾನಿಸುವರು. ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ನಿರ್ದೇಶಕಿ ಚೇತನ ಭಾಗವಹಿಸುವರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಕಾರಸವಾಡಿ ಸುರೇಶ್, ಕೆ.ಜವರೇಗೌಡ, ಹೆಚ್.ಸಿ.ಮಧುಸೂದನ್, ಚಂದ್ರಶೇಖರ್, ಲಂಕೇಶ್ ಮಂಗಲ, ಎಲ್.ಸಂದೇಶ್, ಮಂಜುಳ, ದೇವಮ್ಮ ಜವರೇಗೌಡ ಅವರನ್ನು ಸನ್ಮಾನಿಸಲಾಗುವುದು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!