Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಳೆ ಇಂಡುವಾಳು ಸಚ್ಚಿದಾನಂದ ಬಿಜೆಪಿ ಸೇರ್ಪಡೆ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ,ಯುವನಾಯಕ ಇಂಡುವಾಳು ಎಸ್. ಸಚ್ಚಿದಾನಂದ ನಾಳೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ.

ನಾಳೆ ಬೆಳಿಗ್ಗೆ 9:15 ರಿಂದ 10 ಗಂಟೆಯೊಳಗೆ ಇಂಡುವಾಳು ಎಸ್. ಸಚ್ಚಿದಾನಂದ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್,ಸಿಎಂ ಬಸವರಾಜ ಬೊಮ್ಮಾಯಿ,ಸಚಿವರಾದ ಆರ್.ಅಶೋಕ್ ಮತ್ತಿತರ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಅವರ ಬೆಂಬಲಿಗರು ತಿಳಿಸಿದ್ದಾರೆ.

ಇಂಡುವಾಳು ಸಚ್ಚಿದಾನಂದ ಬಿಜೆಪಿ ಪಕ್ಷ ಸೇರ್ಪಡೆಯಾಗುತ್ತಿರುವ ಸಂದರ್ಭದಲ್ಲಿ ಸಾಕ್ಷಿಯಾಗಲು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸುಮಾರು 1000ಕ್ಕೂ ಹೆಚ್ಚು ಬೆಂಬಲಿಗರು, ಹಿತೈಷಿಗಳು,ಅಭಿಮಾನಿಗಳು ತೆರಳಲಿದ್ದಾರೆ. ಸುಮಾರು 25 ಬಸ್ಸುಗಳು, 10 ಟಿಟಿ ವಾಹನಗಳು,50 ಕಾರುಗಳಲ್ಲಿ ತೆರಳಲು ಸಿದ್ಧತೆ ಮಾಡಲಾಗಿದೆ.

2023ರ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಸಚ್ಚಿದಾನಂದ ಕಳೆದ ಎರಡು ವರ್ಷಗಳಿಂದ ಬಿಜೆಪಿ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದರು.ಆದರೆ ಅಧಿಕೃತವಾಗಿ ಬಿಜೆಪಿ ಸೇರಿರಲಿಲ್ಲ.

ವಿಧಾನಸಭಾ ಚುನಾವಣೆಗೆ ಆರೇಳು ತಿಂಗಳು ಇರುವಾಗ ಸಚ್ಚಿದಾನಂದ ತಮ್ಮ ಸಹಸ್ರಾರು ಬೆಂಬಲಿಗರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.ಸಚ್ಚಿದಾನಂದ ಸೇರ್ಪಡೆಯಿಂದ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಬಲ ಬರಲಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!