ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.16ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಕ್ಟೋಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ಆಯೋಜಿಸಿರುವ ಕೆ.ಆರ್.ಪೇಟೆ ತಾಲ್ಲೂಕಿನ ಸಂಗಾಪುರ, ಪುರ, ಅಂಬಿಗರ ಹಳ್ಳಿಯ ತ್ರೀವೆಣಿ ಸಂಗಮದಲ್ಲಿ ಮಹಾಕುಂಭ ಮೇಳದ ಸಮಾರೋಪ ಸಮಾರಂಭ ಭಾಗವಹಿಸುವರು.
ಮಧ್ಯಾಹ್ನ 2 ಗಂಟೆಗೆ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿ ಹೆಬ್ಭಾಳು ಹೋಬಳಿಯ ಹೆಲಿಪ್ಯಾಡ್ ಅಂಬಿ ಗ್ರಾಮದಿಂದ ಕೇಂದ್ರಸ್ಥಾನ ಬೆಂಗಳೂರಿಗೆ (ಹೆಲಿಕಾಪ್ಟರ್ ಮೂಲಕ)ತೆರಳುವರು ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.