ಕೃಷ್ಣರಾಜಸಾಗರ ಅಣೆಕಟ್ಟೆಯ ಸುರಕ್ಷತೆಯ ಸಂಬಂಧ ಪ್ರಾಯೋಗಿಕ ಸ್ಫೋಟ ಕಾರ್ಯ ಕೈಗೊಳ್ಳುವ ಕುರಿತು ಫೆ.29ರಂದು ಬೆಳಿಗ್ಗೆ 9 ಗಂಟೆಗೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಮಂತ್ರಿ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಉಚ್ಛ ನ್ಯಾಯಾಲಯವು ಹೊರಡಿಸಿರುವ ಮಧ್ಯಂತರ ಆದೇಶವನ್ನು ಪಾಲನೆ ಮಾಡಿ ವರದಿ ಸಲ್ಲಿಸಬೇಕಾಗಿರುವುದರಿಂದ ಈ ಸಭೆ ಆಯೋಜಿಸಲಾಗಿದ್ದು, ಕೃಷ್ಣರಾಜಸಾಗರ ಅಣೆಕಟ್ಟೆಯ 20 ಕಿ.ಮೀ. ವ್ಯಾಪ್ತಿಯಲ್ಲಿನ ಪ್ರದೇಶಗಳಲ್ಲಿ ಪ್ರಾಯೋಗಿಕ ಸ್ಫೋಟನೆ ಕೈಗೊಳ್ಳುವ ಸಂಬಂಧ ಚರ್ಚಿಸಲಾಗುವುದು.
ಸಭೆಯಲ್ಲಿ ಭಾಗವಹಿಸುವಂತೆ ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರಿಗೆ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಹಾಗೂ ರೈತಸಂಘದ ಮುಖಂಡರಿಗೆ ಹಿರಿಯ ಭೂ ವಿಜ್ಞಾನಿ ಅವರು ಸೂಚನ ಪತ್ರ ಕಳುಹಿಸಿದ್ದಾರೆ.