Wednesday, October 23, 2024

ಪ್ರಾಯೋಗಿಕ ಆವೃತ್ತಿ

ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ

ಮೊಬೈಲ್ ಹೆಚ್ಚು ನೋಡಬೇಡ, ಪರೀಕ್ಷೆಗೆ ಚೆನ್ನಾಗಿ ಓದು ಎಂದು ತಂದೆ-ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಸಿಟ್ಟು ಮಾಡಿಕೊಂಡು ಚಲಿಸುತ್ತಿದ್ದ ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಿಂಭಾಗದ ರೈಲ್ವೆ ಹಳಿ ಬಳಿ ನಡೆದಿದೆ.

ಬೆಂಗಳೂರು ಯಲಹಂಕದ ಕೃಷ್ಣಮೂರ್ತಿ ಹಾಗೂ ಮಂಜುಳಾ ದಂಪತಿಯ ಪುತ್ರಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭಾವನ (೧೮) ಮೃತ ಯುವತಿ.

ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಹೆಚ್ಚು ಮೊಬೈಲ್ ವ್ಯಸನಿಯಾಗಿದ್ದ ಭಾವನಾಳಿಗೆ ಪೋಷಕರು ಬುದ್ಧಿಮಾತು ಹೇಳಿ ಮೊಬೈಲ್ ಕಸಿದುಕೊಂಡಿದ್ದರು. ಇದರಿಂದ ಬೇಸತ್ತ ಆಕೆ ಖಿನ್ನತೆಗೆ ಒಳಗಾಗಿ ಇಂದು ಮಂಡ್ಯ ನಗರಕ್ಕೆ ಬಂದು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ರೈಲಿಗೆ ಸಿಲುಕಿದ ಸಂದರ್ಭ ಭಾವನಾಳ ಕಾಲು ತುಂಡಾಗಿದ್ದು, ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿದ್ದಾಳೆ. ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!