ಕ್ಷುಲಕ ಕಾರಣಕ್ಕಾಗಿ ಮದ್ದೂರು KSRTC ಗ್ರಾಮೀಣ ಸಾರಿಗೆ ಬಸ್ ಡ್ರೈವರ್ ಮತ್ತು ಕಂಡಕ್ಟರ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಗೆಜ್ಜಲಗೆರೆ ಬಳಿ ನಡೆದಿದೆ.
ಬಸ್ ನಿಲ್ಲಿಸಿ ನಮ್ಮನ್ನು ಹತ್ತಿಸಿಕೊಂಡು ಬರಲಿಲ್ಲ ಎಂಬ ಕಾರಣಕ್ಕೆ ಚಲಿಸುತ್ತಿದ್ದ ಬಸ್ ಅನ್ನು ಗೆಜ್ಜಲಗೆರೆ ಮುಂಭಾಗ ಅಡ್ಡಗಟ್ಟಿ ನನ್ನನ್ನು ಹಾಗೂ ಕಂಡಕ್ಟರನನ್ನು ಚೆನ್ನಾಗಿ ಹೊಡೆದರು. ಹೊಡೆಯಬೇಡಿ ಎಂದು ಎಷ್ಟು ಹೇಳಿದರೂ ಕೇಳಲಿಲ್ಲ.ನಮ್ಮ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಚಾಲಕ ಕುಮಾರಸ್ವಾಮಿ ಒತ್ತಾಯಿಸಿದರು.
ಗಾಯಾಳು ಡ್ರೈವರ್ ಮತ್ತು ಕಂಡಕ್ಟರ್ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮದ್ದೂರು ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಸ್ಥಳಕ್ಕೆ ಸಾರಿಗೆ ಡಿಸಿ ಭೇಟಿ ನೀಡಿದ್ದರು.