Tuesday, May 14, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕೆಪಿಸಿಸಿ ವಕ್ತಾರರಾಗಿ ಟಿ.ಎಸ್ ಸತ್ಯಾನಂದ ಮರುನೇಮಕ

ಖ್ಯಾತ ವಕೀಲ ಹಾಗೂ ಕಾಂಗ್ರೆಸ್ ಪಕ್ಷದ‌ ಮುಖಂಡ ಟಿ. ಎಸ್ ಸತ್ಯಾನಂದ‌ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ‌ ಮರುನೇಮಿಸುವುದರ ಜೊತೆಗೆ, ಮೈಸೂರು ವಿಭಾಗದ ಉಸ್ತುವಾರಿಯನ್ನು ‌ವಹಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ‌ ಶಿವಕುಮಾರ್ ಆದೇಶ ಹೊರಡಿಸಿದ್ದಾರ.ಎ

ವಿಧ್ಯಾರ್ಥಿ ಕಾಂಗ್ರೆಸ್ ಸಂಘಟನೆಯ ಮೂಲಕ ಪಕ್ಷದ ಸಂಘಟನೆಗೆ‌ ತಮ್ಮನ್ನು ತೊಡಗಿಸಿಕೊಂಡ ಸತ್ಯಾನಂದ ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಮಂಡ್ಯ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ, ಕೆಪಿಸಿಸಿ ಸದಸ್ಯರಾಗಿ ಹಲವು ವರ್ಷಗಳ ಕಾಲ ಹಲವು‌ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿರುವ ಸತ್ಯಾನಂದ, ಹಲವು ಜನಪರ ಹೋರಾಟಗಳ ಮುಂಚೂಣಿ ನಾಯಕರಾಗಿ  ಸಾಮಾಜಿಕ ಹೋರಾಟಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಸಾಮಾಜಿಕ ಬದ್ದತೆಯನ್ನು ವ್ಯಕ್ತಪಡಿಸಿದ್ದಾರೆ.

ತಮ್ಮ ನೇರ ನಡೆ ನುಡಿಯ ಮೂಲಕ ಮಾಧ್ಯಮಗಳಲ್ಲಿ ಪಕ್ಷದ ಸಿದ್ದಾಂತವನ್ನು ಪ್ರತಿಪಾದಿಸಿ ಪಕ್ಷದ ಪರವಾಗಿ ಹೋರಾ ಗುಣ ಬೆಳೆಸಿಕೊಂಡಿರುವ ಇವರ‌ ಸೇವೆಯನ್ನು ಸಮರ್ಥವಾಗಿ ಬಳಸಿಕೊಳ್ಳಲು ಇವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಿಸಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!