ಟ್ಯಾಕ್ಟರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮದ್ದೂರು ತಾಲೂಕು ಮಾದರಹಳ್ಳಿ ಗ್ರಾಮದಲ್ಲಿ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಜರುಗಿದೆ.
ಮರಕಾಡುದೊಡ್ಡಿ ಗ್ರಾಮದ ದೀಪು ಮತ್ತು ಶಿವು ಎಂಬುವವರೇ ಮೃತಪಟ್ಟ ಯುವಕರು.
ಗುರುವಾರ ತಡರಾತ್ರಿ ಸುಮಾರು 11 ಘಂಟೆಯ ಸಮಯದಲ್ಲಿ ಕೆ ಎಂ ದೊಡ್ಡಿಯಿಂದ ಮಾದರಹಳ್ಳಿ ಮಾರ್ಗವಾಗಿ ಮಂಡ್ಯ ಕಡೆಗೆ ಹೋಗುತ್ತಿದ್ದ ಬೈಕ್ ಸವಾರರು ಮಾದರಳ್ಳಿ ಮಾರ್ಗವಾಗಿ ಕೆಎಂ ದೊಡ್ಡಿಯ ಶ್ರೀ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಬರುತ್ತಿದ್ದ ಡಬಲ್ ಇಂಜಿನ್ ಟ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಹಾಗೂ ಹಿಂಬದಿಯಲ್ಲಿ ಕುಳಿತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರು.
ಈ ಸಂಬಂಧ ಕೆ.ಎಂ ದೊಡ್ಡಿ ಪೊಲೀಸರಿಗೆ ಸ್ಥಳೀಯರು ದೂರು ನೀಡಿದ ಮೇರೆಗೆ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಡ್ಯ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ