Thursday, September 19, 2024

ಪ್ರಾಯೋಗಿಕ ಆವೃತ್ತಿ

ಉತ್ಸವ ಮೂರ್ತಿ ಇಲ್ಲದೇ ಉತ್ಸವ ಮಾಡಿದಂತೆ : ಸಿ.ಎಸ್.ಪುಟ್ಟರಾಜು ವ್ಯಂಗ್ಯ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಲ್ಲದೇ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿರುವುದು ”ಉತ್ಸವಮೂರ್ತಿ ಇಲ್ಲದೇ ಉತ್ಸವ ಮಾಡಿದಂತೆ”ಎಂದು ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರು ಪಾಂಡವಪುರದಲ್ಲಿ ದೇವೇಗೌಡರನ್ನು ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಬಿಜೆಪಿ ಸರ್ಕಾರ ಆಹ್ವಾನಿಸದಿರುವ ಬಗ್ಗೆ ಪ್ರಶ್ನಿಸಿದಾಗ, ಮುಂದಿನ ದಿನಗಳಲ್ಲಿ ಈ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಾಗುವುದು. ದೇವೇಗೌಡರು ಒಕ್ಕಲಿಗ ಸಮುದಾಯದ ಅಗ್ರಗಣ್ಯ ನಾಯಕರು. ಅವರನ್ನು ಕೇವಲ ರಾಜಕೀಯಕ್ಕಾಗಿ ಕರೆಯದೇ ಇರುವುದು ಬಿಜೆಪಿ ನಾಯಕರ ಸಣ್ಣತನವನ್ನು ತೋರಿಸುತ್ತದೆ ಎಂದು ತಿರುಗೇಟು ನೀಡಿದರು.

ಹಿರಿಯ ನಾಯಕರಾದ ದೇವೇಗೌಡ, ಎಸ್.ಎಂ.ಕೃಷ್ಣ ಹಾಗೂ ಯಡಿಯೂರಪ್ಪ ಅವರನ್ನು ರಾಜ್ಯದ ದೊಡ್ಡ ಶಕ್ತಿ ಅವರನ್ನು ನಿರ್ಲಕ್ಷಿಸುವುದು ಖಂಡನೀಯ. ಈಗಲಾದರೂ ಸರ್ಕಾರ ಎಚ್ಚೇತ್ತುಕೊಳ್ಳಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಮುನ್ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!