Saturday, October 19, 2024

ಪ್ರಾಯೋಗಿಕ ಆವೃತ್ತಿ

ಕ್ಷಯರೋಗ ಪತ್ತೆ ಹಚ್ಚುವಲ್ಲಿ ಟ್ರುನಾಟ್ ಯಂತ್ರ ಸಹಕಾರಿ: ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ

ಟ್ರುನಾಟ್ ಯಂತ್ರವು ಕ್ಷಯರೋಗವನ್ನು ಶೀಘ್ರ ಪತ್ತೆ ಹಚ್ಚುವಲ್ಲಿ ತುಂಬಾ ಸಹಕಾರಿಯಾಗಲಿದೆ ಎಂದು ಮಾಜಿ ಶಾಸಕರಾದ ವಿಜಯಲಕ್ಷ್ಮಿ ಬಂಡಿಸಿದ್ದೇಗೌಡ ಹೇಳಿದರು.

ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ,ಜಿಲ್ಲಾ ಕ್ಷಯ ರೋಗ ನಿರ್ಮೂಲ ಅಧಿಕಾರಿಗಳ ಕಚೇರಿ ವತಿಯಿಂದ ಪೂರೈಸಿದ ನವೀನ ಮಾದರಿಯ ಟ್ರುನಾಟ್ ಯಂತ್ರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ಷಯ ರೋಗ ಲಕ್ಷಣ ಕಂಡು ಬಂದಲ್ಲಿ ಸಾರ್ವಜನಿಕರು ಈ ಯಂತ್ರದ ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ ಮೋಹನ್ , ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಆಶಾಲತಾ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಸೋಮಶೇಖರ್,ಪ್ರಭಾರಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಡಿ ಟಿ ಮಂಜುನಾಥ್, ಗ್ರಾ ಪಂ ಅಧ್ಯಕ್ಷ ಮಂಜುನಾಥ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸುಮ,ಮುರಳಿ ಸಿದ್ದೇಶ್, ಸುನಿಲ್,ಸ್ತ್ರೀರೋಗ ತಜ್ಞೆ ಡಾ ಸವಿತಾ,ಡಾಕ್ಟರ್ ತ್ಯಾಗರಾಜ್,ಡಾ ಅರುಣಕುಮಾರ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!