ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ದು ಮಾಡುತ್ತಿದ್ದ ನರಭಕ್ಷಕ ರಸ್ತೆಗುಂಡಿಗಳ ಹಾವಳಿ ರಾಜ್ಯಾದ್ಯಂತ ಹೆಚ್ಚಾಗಿದೆ. ರಸ್ತೆಗುಂಡಿಯಿಂದಾಗಿ ಪ್ರವಾಸಕ್ಕೆ ಹೊರಟಿದ್ದ ಬಸ್ವೊಂದರ ಆಕ್ಸಿಲ್ ತಂಡಾಗಿ, ಹಿಂದಿನ ಎರಡೂ ಚಕ್ರಗಳು ಕಳಚಿ ಬಿದ್ದು ಅಪಘಾತ ಸಂಭವಿಸಿದೆ.
ಮಂಡ್ಯದಲ್ಲಿ ಮಾತ್ರ ರಸ್ತೆಗುಂಡಿ ಹಾವಳಿ ಮಾತ್ರವಲ್ಲ, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪಾ ತಾಲೂಕಿನ ತೆಕ್ಕಲಕೋಟ ಶಾಲಾ ಮಕ್ಕಳು ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಬಸ್ ನಿಧಾನವಾಗಿ ಚಲಿಸುತ್ತಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.
ಸುಮಾರು 50 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬಸ್ನಲ್ಲಿದ್ದರು. ಚಾಲಕ ಸಮಯಪ್ರಜ್ಞೆಯಿಂದ ಕೂಡಲೇ ವಾಹನ ನಿಲ್ಲಿಸಿದ್ದಾನೆ. ಬಸ್ ನಿಧಾನವಾಗಿ ಚಲಿಸುತ್ತಿದ್ದರಿಂದ ದೊಡ್ಡ ಪ್ರಮಾಣದ ಅನಾಹುತ ತಪ್ಪಿದೆ. ಬಸ್ಸಿನ ಹಿಂಬದಿ ಏಕಾಏಕಿ ನೆಲಕ್ಕೆ ಅಪ್ಪಳಿಸಿದ್ದರಿಂದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.