ಕರ್ನಾಟಕ ರಾಜ್ಯದ ಡಾ ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಒಕ್ಕೂಟದ ವತಿಯಿಂದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅಂತ್ಯಕ್ರಿಯೆ ಮಾಡಿದ ಪುಣ್ಯಭೂಮಿಯ ಸ್ಥಳದ ಉಳಿವಿಗಾಗಿ ಢಿ.17ರಂದು ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾ ವಿಷ್ಣು ಸೇನಾ ಸಮಿತಿಯ ಮುಖಂಡ ವಿಷ್ಣು ವಿಠಲ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಬೆಳಿಗ್ಗೆ 9 ರಿಂದ 4 ಗಂಟೆಯವರೆಗೆ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ, ಆದ್ದರಿಂದ ಸಮಸ್ತ ವಿಷ್ಣುವರ್ಧನ್ ಅಭಿಮಾನಿಗಳು ಹಾಗು ಕನ್ನಡಪರ ಸಂಘಟನೆಗಳ ಎಲ್ಲಾ ಕನ್ನಡ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಗೋಷ್ಠಿಯಲ್ಲಿ ವಿಷ್ಣು ಸೇನಾ ಸಮಿತಿಯ ಹೆಚ್.ಪಿ.ಸತೀಶ್, ಮಹೇಶ್, ಖಲಂಧರ್ ಹಾಗೂ ಸುಧಾರಣೆ ಉಪಸ್ಥಿತರಿದ್ದರು.