Friday, September 20, 2024

ಪ್ರಾಯೋಗಿಕ ಆವೃತ್ತಿ

ವಿಶಿಷ್ಟ್ ಮಕ್ಕಳ ಉತ್ಸವ ಕಾರ್ಯಕ್ರಮ

ವಿಶಿಷ್ಟ್ ಮಾಂಟೆಸ್ಸರಿ‌ ಶಾಲೆಯ ವತಿಯಿಂದ ನಗರದ ಗಾಂಧಿಭವನದಲ್ಲಿಂದು ವಿಶಿಷ್ಟ್ ಮಕ್ಕಳ ಉತ್ಸವ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಡಾ. ಮಹೇಶ್ ಕುಮಾರ್ ಕೆ.ಎಂ. ಮಾತನಾಡಿ, ಪೋಷಕರು ಮಕ್ಕಳಿಗೆ ಪಾಠದ ಜೊತೆಗೆ ಪಠ್ಯೇತರ, ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹವನ್ನು ನೀಡಬೇಕೆಂದು ಕರೆ ನೀಡಿದರು. ಜೊತೆಗೆ ಮಕ್ಕಳನ್ನು ಮೊಬೈಲ್ ಜಾಲಕ್ಕೆ ಸಿಲುಕಿಸದಿರಿ ಎಂದು ಪೋಷಕರಿಗೆ ಸಲಹೆ ನೀಡಿದರು.

ಪೌಷ್ಟಿಕಾಂಶ ಭರಿತ ಆಹಾರವನ್ನು ಮಕ್ಕಳಿಗೆ ಕೊಡುವ ಬಗ್ಗೆ ಹಾಗೂ ಮಕ್ಕಳ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವ ಬಗ್ಗೆ ಪೋಷಕರಿಗೆ ಕಿವಿಮಾತನ್ನು ಹೇಳಿದರು. ಇದೇ ಸಂದರ್ಭದಲ್ಲಿ ಯುಕೆಜಿ ಮಕ್ಕಳಿಗೆ ಬೀಳ್ಕೊಡುಗೆ ಕೊಟ್ಟು ಘಟಿಕೋತ್ಸವ ನೇರವೇರಿಸಿಕೊಟ್ಟರು. ಮಕ್ಕಳೊಟ್ಟಿಗೆ ತಂದೆಯರು ನೃತ್ಯ ಮಾಡಿ ಎಲ್ಲರ ಕಣ್ಮನ ಸೆಳೆದದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.

ಕಾರ್ಯಕ್ರಮದಲ್ಲಿ ವಿಜೆಇ ಟ್ರಸ್ಟ್ ನ ಪದಾಧಿಕಾರಿಗಳಾದ ಶಿವಶಂಕರ್ ಕೆ, ರವಿಕುಮಾರ್ ಎನ್.ಕೆ., ಕವಿತಾ ಮಂಜುನಾಥ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!