Thursday, September 19, 2024

ಪ್ರಾಯೋಗಿಕ ಆವೃತ್ತಿ

ನ್ಯಾಯಾಂಗ ನಿಂದನೆ : ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಕ್ಷಮೆಯಾಚನೆ

‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ್ದಾರೆ. ಅಲ್ಲದೇ 2023ರ ಮಾರ್ಚ್​ 16ರಂದು ನಡೆಯುವ ಮುಂದಿನ ವಿಚಾರಣೆಯಲ್ಲಿ ಖುದ್ದಾಗಿ ವಿವೇಕ್​ ಅಗ್ನಿಹೋತ್ರಿ ಹಾಜರಿರಬೇಕು ಎಂದು ದೆಹಲಿ ಹೈಕೋರ್ಟ್​ ಆದೇಶಿಸಿದೆ.

ವಿವೇಕ್​ ಅಗ್ನಿಹೋತ್ರಿ ಆಗುಹೋಗುಗಳಿಗೆ ಪ್ರತಿಕ್ರಿಯಿಸುವ ಭರದಲ್ಲಿ ವಿವಾದ ಮಾಡಿಕೊಂಡಿದ್ದರು. ಈ ಹಿಂದೆ ಅವರು ಮಾಡಿದ್ದ ಒಂದು ಟ್ವೀಟ್​ನಿಂದಾಗಿ ನ್ಯಾಯಾಂಗ ನಿಂದನೆ (Contempt of Court) ಆರೋಪ ಎದುರಾಗಿತ್ತು. ಈ ಪ್ರಕರಣದಲ್ಲಿ ಅವರೀಗ ದೆಹಲಿ ಹೈಕೋರ್ಟ್​ನಲ್ಲಿ ಬೇಷರತ್​ ಕ್ಷಮೆ ಯಾಚಿಸಿದ್ದಾರೆ. ತಮ್ಮ ವಕೀಲರ ಪರವಾಗಿ ಅವರು ಅಫಿಡವಿಟ್​ ಸಲ್ಲಿಸಿದ್ದಾರೆ. ಆದರೆ ಈ ಪ್ರಕರಣದ ಅಂತಿಮ ವಿಚಾರಣೆಯ ಸಮಯದಲ್ಲಿ ವಿವೇಕ್​ ಅಗ್ನಿಹೋತ್ರಿ ಅವರು ಖುದ್ದು ಹಾಜರಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಏನಿದು ಪ್ರಕರಣ?

2018ರ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಗೌತಮ್​ ನವಲಖ ಅವರಿಗೆ ಈ ಹಿಂದೆ ಜಾಮೀನು ನೀಡಲಾಗಿತ್ತು. ಅಂದಿನ ನ್ಯಾಯಮೂರ್ತಿಗಳಾದ ಎಸ್​.ಮುರಳೀಧರ್​ ಅವರ ಮೇಲೆ ಪಕ್ಷಪಾತದ ಆರೋಪ ಹೊರಿಸುವ ರೀತಿಯಲ್ಲಿ ವಿವೇಕ್ ಅಗ್ನಿಹೋತ್ರಿ ಟ್ವೀಟ್​ ಮಾಡಿದ್ದರು. ಈ ಸಂಬಂಧವಾಗಿ ನ್ಯಾಯಾಲಯವು ನ್ಯಾಯಾಂಗ ನಿಂದನೆ ಕೇಸ್​ ದಾಖಲಿಸಿಕೊಂಡಿತ್ತು.

ತಾವು ಮಾಡಿದ್ದ ಟ್ವೀಟ್​ ಅನ್ನು ವಿವೇಕ್​ ಅಗ್ನಿಹೋತ್ರಿ ಡಿಲೀಟ್​ ಮಾಡಿದ್ದಾರೆ ಎಂದು ಅವರ ಪರ ವಕೀಲರು ವಾದಿಸಿದ್ದಾರೆ. ಆದರೆ ಅದನ್ನು ಡಿಲೀಟ್​ ಮಾಡಿದ್ದು ವಿವೇಕ್​ ಅಗ್ನಿಹೋತ್ರಿ ಅಲ್ಲ, ಬದಲಿಗೆ ಟ್ವಿಟರ್​ ಅದನ್ನು ಡಿಲೀಟ್​ ಮಾಡಿತ್ತು ಎಂದು ನ್ಯಾಯಾಲಯದ ಪರ ವಕೀಲರು ವಾದಿಸಿದ್ದಾರೆ. ವಿವೇಕ್​ ಅಗ್ನಿಹೋತ್ರಿ ಅವರು ಯಾಕೆ ಖುದ್ದಾಗಿ ವಿಚಾರಣೆಗೆ ಹಾಜರಾಗಿಲ್ಲ ಎಂದು ನ್ಯಾಯಾಲಯ ಕಾರಣ ಕೇಳಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2023ರ ಮಾರ್ಚ್​ 16ರಂದು ಮುಂದಿನ ವಿಚಾರಣೆ ನಡೆಯಲಿದೆ. ಅಂದು ಖುದ್ದಾಗಿ ವಿವೇಕ್​ ಅಗ್ನಿಹೋತ್ರಿ ಅವರು ಹಾಜರಿರಬೇಕು ಎಂದು ಕೋರ್ಟ್​ ಆದೇಶಿಸಿದೆ. ಅಂದು ತಮ್ಮ ಪರವಾದ ಎಲ್ಲ ಸಾಕ್ಷ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದೆ.

‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ನಿರ್ದೇಶನ ಮಾಡಿದ ಬಳಿಕ ವಿವೇಕ್​ ಅಗ್ನಿಹೋತ್ರಿ ಅವರ ಖ್ಯಾತಿ ಹೆಚ್ಚಾಗಿದೆ. ಕಡಿಮೆ ಬಜೆಟ್​ನಲ್ಲಿ ಸಿದ್ಧಗೊಂಡ ಆ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಬರೋಬ್ಬರಿ ₹ 250 ಕೋಟಿ ಗಿಂತಲೂ ಅಧಿಕ ಕಲೆಕ್ಷನ್​ ಮಾಡಿತು. ಅಲ್ಲದೇ ದೇಶಾದ್ಯಂತ ಚರ್ಚೆ ಹುಟ್ಟುಹಾಕಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!