Thursday, September 19, 2024

ಪ್ರಾಯೋಗಿಕ ಆವೃತ್ತಿ

ನಿಖಿಲ್ ಕುಮಾರಸ್ವಾಮಿಗೆ ಉನ್ನತ ಸ್ಥಾನ ದೊರಕಲಿ : ವಿ.ಎಂ.ವಿಶ್ವನಾಥ್

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನವನ್ನು ದೇವರು ಕರುಣಿಸಲಿ ಎಂದು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಹಾಗೂ ಕೆಎಂಎಫ್ ನಿರ್ದೇಶಕ ವಿ.ಎಂ. ವಿಶ್ವನಾಥ್ ತಿಳಿಸಿದರು.

ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಅವರು ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿರವರಂತೆ ನಿಖಿಲ್ ಕುಮಾರಸ್ವಾಮಿ ರವರು ಸಹ ರಾಜ್ಯದ ರಾಜಕಾರಣದಲ್ಲಿ ತೊಡಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ‌.ಯುವಕರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆಯುತ್ತಿರುವ ನಿಖಿಲ್ ಕುಮಾರಸ್ವಾಮಿ ಅವರಿಗೆ ಮುಂದಿನ ದಿನಗಳಲ್ಲಿ ಉನ್ನತ ಸ್ಥಾನ ದೊರಕಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ಉಪಾಧ್ಯಕ್ಷ ಪ್ರಶಾಂತ್, ಕುಂತೂರು ಸೋಮಶೇಖರ್, ಶ್ರೀಧರ್ ಸೇರಿದಂತೆ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!