ಮದ್ದೂರು ತಾಲ್ಲೂಕಿನ ಭಾರತೀನಗರ ಸಮೀಪದ ಮಾಲಗಾರನಹಳ್ಳಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಬಾಲಕ-ಬಾಲಕೀಯರ ವಾಲಿಬಾಲ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
2023-2024 ನೇ ಸಾಲಿನ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆಂದು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸೋಮಸುಂದರ್ ತಿಳಿಸಿದ್ದಾರೆ.
ಕ್ರೀಡಾ ವಿದ್ಯಾರ್ಥಿಗಳು, ಹಾಗೂ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಅಣ್ಣೂರು ಎಸ್.ಕುಮಾರ್ ಅವರನ್ನು ಗ್ರಾ.ಪಂ ಅಧ್ಯಕ್ಷರು-ಸದಸ್ಯರು ಸೇರಿದಂತೆ ಶಾಲಾ ಮುಖ್ಯ ಶಿಕ್ಷಕ ಸೋಮಸುಂದರ್, ಶಿಕ್ಷಕರಾದ ಸುಕನ್ಯ, ಲಲಿತ, ನಾಗರಾಜು, ರಾಜೇಂದ್ರ, ಲೋಕೇಶ್, ಜಯರಾಮು ಅವರು ಅಭಿನಂದಿಸಿದ್ದಾರೆ.