Thursday, September 19, 2024

ಪ್ರಾಯೋಗಿಕ ಆವೃತ್ತಿ

ಪ್ರಾಣಿ ಪಕ್ಷಿಗಳಿಗೆ ನೀರಿಡಲು ಸಿಮೆಂಟ್ ಬೌಲ್ ವಿತರಣೆ 

ಪುಷ್ಪಾಂಜಲಿ ಟ್ರಸ್ಟ್ ವತಿಯಿಂದ ಮಂಡ್ಯನಗರ ಆಯ್ದ ನಾಗರೀಕರ ಮನೆಗಳಿಗೆ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಡಲು ಸಿಮೆಂಟ್ ಬೌಲ್ ಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ ಎಂದು ಟಸ್ಟ್ ನ ಸಂಸ್ಥಾಪಕ ಸಂದೀಪ್ ಜೈನ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಟ್ರಸ್ಟ್ ವತಿಯಿಂದ ಹಲವು ಜನೋಪಯೋಗಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದೇವೆ, ಈ ಬಾರಿ 1001 ಸಿಮೆಂಟ್ ಬೌಲ್ ಗಳನ್ನು ಉಚಿತವಾಗಿ ವಿತರಿಸುವ ಕಾರ್ಯ ಮಾಡುತ್ತಿದ್ದೇವೆ ಎಂದರು.

ಗೋಶಾಲೆಯು ತೂಬಿನಕೆರೆಯ ಮುಖ್ಯ ರಸ್ತೆಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ, ಮುಂಬರುವ ದಿನಗಳಲ್ಲಿ 10ನೇ ತರಗತಿ ಹಾಗೂ ಪಿ.ಯು.ಸಿ: ಮಕ್ಕಳಿಗೆ ಮಾರ್ಗದರ್ಶನಕ್ಕಾಗಿ ಪ್ರವಚನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಗೋಷ್ಠಿಯಲ್ಲಿ ವಿಕಾಸ್ ಬನ್ಸಾಲಿ, ದಿನೇಶ್,  ಪ್ರಿಯಾಂಕ ದಲಾಲ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!