ಕುಣಿಗಲ್ ತಾಲ್ಲೂಕು ಮಾರ್ಕೋನಹಳ್ಳಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯದಿಂದ ಶಿಂಷಾ ನದಿಗೆ ಹೆಚ್ಚು ನೀರನ್ನು ಹೊರಬಿಡಲಾಗುತ್ತಿದ್ದು, ಜನತೆ ಹಾಗೂ ಜಾನುವಾರುಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಶ್ವಥಿ ಅವರು ಸೂಚನೆ ನೀಡಿದ್ದಾರೆ.
ಸಾರ್ವಜನಿಕರು ಸಹ ಮಾರ್ಕೋನಹಳ್ಳಿ ಜಲಾನಯನ ಪ್ರದೇಶ ಹಾಗೂ ಶಿಂಷಾ ನದಿ ಹತ್ತಿರದ ಅಪಾಯದ ಪ್ರದೇಶವನ್ನು ಪ್ರವೇಶಿಸದಂತೆ ಮುನ್ನಚ್ಚರಿಕೆ ವಹಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.