ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವತಿಯು ಕಾವೇರಿ ನದಿ ನೀರಿಗಾಗಿ ವಾರಕ್ಕೊಮ್ಮೆ ಚಳವಳಿಯನ್ನು ಸೋಮವಾರ ಮಂಡ್ಯದಲ್ಲಿ ನಡೆಸಿತು.
ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಎದುರು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಆಶ್ರಯದಲ್ಲಿ ಹೋರಾಟ ಗಾರರು ಭಿತ್ತಿಪತ್ರಗಳನ್ನು ಅಂಟಿಸುವ ಮೂಲಕ ಪ್ರತಿಭಟಿಸಿದರು.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ನಿರಂತರ ಅನ್ಯಾಯ ಆಗುತ್ತಿದೆ, ಆಳುವ ಸರ್ಕಾರಗಳು ರೈತರಿಗೆ ನ್ಯಾಯ ದೊರಕಿಸಿಕೊಡಲು ಮುಂದಾಗುತ್ತಿಲ್ಲ, ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಜಲಾಶಯಗಳಲ್ಲಿ ನೀರಿಲ್ಲದಂತಾಗಿದೆ, ರೈತರು ಬೆಳೆ ಹಾಕಬಾರದು ಎಂದು ಸರ್ಕಾರ ಘೋಷಿಸಿದೆ, ರೈತರಿಗೆ ಎರಡು ಬೆಳೆ ಕೈ ತಪ್ಪಿದೆ, ಜೊತೆಗೆ ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ, ಜಿಲ್ಲೆಯಲ್ಲಿ 3,600 ಕೋಟಿ ಬೆಳಗಿನಷ್ಟವಾಗಿದ್ದು, ಸರ್ಕಾರ ಈ ಕೂಡಲೇ ಬೆಳೆ ನಷ್ಟ ಪರಿಹಾರ ಪಾವತಿಸಬೇಕು ಎಂದು ಒತ್ತಾಯಿಸಿದರು.
ರೈತ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ ಬೋರಯ್ಯ, ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಮ್,ರೈತ ಸಂಘದ ಇಂಡುವಾಳು ಚಂದ್ರಶೇಖರ್, ಮುದ್ದೆ ಗೌಡ, ಫಯಾಜ್, ನಾರಾಯಣಸ್ವಾಮಿ ನೇತೃತ್ವ ವಹಿಸಿದ್ದರು.