Thursday, September 19, 2024

ಪ್ರಾಯೋಗಿಕ ಆವೃತ್ತಿ

ಗೆಲುವು ಸಾಧಿಸುವ ವಿಶ್ವಾಸವಿದೆ: ಮಧು ಜಿ.ಮಾದೇಗೌಡ

ಈ ಬಾರಿ ಪದವೀಧರ ಮತದಾರರು ಕಾಂಗ್ರೆಸ್ ಪರ ಒಲವು ತೋರಿಸಿದ್ದು, ನಾನು ಗೆಲ್ಲುವ ವಿಶ್ವಾಸ ಮೂಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ತಿಳಿಸಿದರು.

ಮದ್ದೂರು ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ಮತಗಟ್ಟೆ ಸಂಖ್ಯೆ 24 ರಲ್ಲಿ ಸರದಿ ಸಾಲಿನಲ್ಲಿ ನಿಂತು ಸಾಮಾನ್ಯ ಮತದಾರನಂತೆ ಮತ ಚಲಾಯಿಸಿದರು. ಮತ ಚಲಾವಣೆ ನಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರ ಜೊತೆ ಮತ ಹಾಕಿದ ಗುರುತು ತೋರಿಸಿ ಹರ್ಷ ವ್ಯಕ್ತಪಡಿಸಿದರು.

ಪದವೀಧರ ಮತದಾರರು ಪ್ರಜ್ಞಾವಂತ ರಾಗಿರುವುದರಿಂದ ಯಾವುದೇ ಆಸೆ, ಆಮಿಷಗಳಿಗೆ ಅವರು ಜಗ್ಗುವುದಿಲ್ಲ.ಅವರು ಯಾವ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಮೊದಲೇ ನಿರ್ಧಾರಿಸಿರುತ್ತಾರೆ.ಈ ಬಾರಿ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ನನಗೆ ಉತ್ತಮ ಅವಕಾಶವಿದ್ದು,ಮತದಾರರು ಕಾಂಗ್ರೆಸ್ ಪರ ಮತ ಚಲಾಯಿಸುವ ವಿಶ್ವಾಸ ಮೂಡಿಸಿದೆ ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಗುರುಚರಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಸಂದರ್ಶ, ಜೋಗಿಗೌಡ,ಯೋಗೇಶ್, ನಾಗರಾಜು, ಕುಮಾರ್, ರಾಮಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!