ಸಂಪೂರ್ಣ ಎಲ್ಲಾ ಪಾತ್ರಗಳನ್ನು ಮಹಿಳೆಯರೇ ಅಭಿನಯಿಸಲಿರುವ ‘ದಾನಶೂರ ಕರ್ಣ’ ನಾಯಕ ಪ್ರದರ್ಶನ ಮಾ.12ರಂದು ಮಧ್ಯಾಹ್ನ 12 ಗಂಟೆಗೆ ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆಯಲಿದೆ.
ಭೈರವಿ ಹವ್ಯಾಸಿ ಮಹಿಳಾ ಕಲಾ ಬಳಗ, ಸಂಭ್ರಮ ಮಹಿಳಾ ಮಂಡಳಿ, ಮಂಡ್ಯ ಮತ್ತು ನೆಲದನಿ ಬಳಗ ಮಂಗಲ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಈ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಈ ನಾಟಕದ ಎಲ್ಲಾ ಪಾತ್ರಗಳನ್ನು ಮಹಿಳೆಯರೇ ಅಭಿನಯಿಸುತ್ತಿದ್ದು, ಸಾರ್ವಜನಿಕರು ಮತ್ತು ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಹಿಳಾ ಕಲಾವಿದರನ್ನು ಪ್ರೋತ್ಸಾಹಿಸುವಂತೆ ನೆಲದನಿ ಬಳಗದ ಅಧ್ಯಕ್ಷ ಮಂಗಲ ಲಂಕೇಶ್ ಮನವಿ ಮಾಡಿದ್ದಾರೆ.