Thursday, September 19, 2024

ಪ್ರಾಯೋಗಿಕ ಆವೃತ್ತಿ

ನಿಮ್ಮ ಋಣ ತೀರಿಸುವ ಕೆಲಸ ಮಾಡ್ತೇನೆ : ಗಣಿಗ ರವಿಕುಮಾರ್

ಮಂಡ್ಯ ವಿಧಾನಸಭಾ ಚುನಾವಣೆಯಲ್ಲಿ ನನಗೆ ಈ ಬಾರಿ ಒಂದು ಅವಕಾಶ ನೀಡಿದರೆ ಜನರ ಋಣ ತೀರಿಸುವ ಕೆಲಸ ಮಾಡಿ ತೋರಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಗಣಿಗ ರವಿಕುಮಾರ್ ಮನವಿ ಮಾಡಿದರು.

ಮಂಡ್ಯ ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಏರ್ಪಡಿಸಿದ್ದ ತಮ್ಮ ಜನ್ಮದಿನದ ಆಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಂಡ್ಯ ಕ್ಷೇತ್ರದ ಜನರು ಈ ಬಾರಿ ನನ್ನನ್ನು ಶಾಸಕನಾಗಿ ಮಾಡಲು ಕ್ಷೇತ್ರದ ಎಲ್ಲೆಡೆ ನಿಂತಿದ್ದಾರೆ. ಏಕೆಂದರೆ ಮಂಡ್ಯ ಅಭಿವೃದ್ಧಿ ಆಗಬೇಕು ಹಾಗೂ ಹೊಸತನ ಕಾಣಬೇಕೆಂದು ಜನರು ಆಸೆ ಪಟ್ಟಿದ್ದಾರೆ. ಮಂಡ್ಯದಲ್ಲಿ ಒಂದು ಸಾವಿರ ಎಕರೆ ಜಮೀನು ಪಡೆದುಕೊಂಡು ಬೆಂಗಳೂರಿನಲ್ಲಿರುವ ಎಲ್ಲಾ ದೊಡ್ಡ ಶಿಕ್ಷಣ ಸಂಸ್ಥೆಗಳಿಗೆ ತಲಾ ಐದು ಎಕರೆ ಜಮೀನು ನೀಡಿದರೆ ಇಂಟರ್ ನ್ಯಾಷನಲ್ ಸ್ಕೂಲ್, ಕಾಲೇಜುಗಳು ತೆರೆಯುತ್ತವೆ. ಇದರಿಂದ ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ನಿರುದ್ಯೋಗಿ ಯುವಜನತೆಗೆ ಕೆಲಸವೂ ಸಿಗುತ್ತದೆ ಎಂದರು.

ಮಂಡ್ಯ ವಿಧಾನಸಭಾ ಕ್ಷೇತ್ರದ ಜನರು ನನಗೆ ಆಶೀರ್ವಾದ ಮಾಡುವ ವಿಶ್ವಾಸವಿದೆ.ಮಂಡ್ಯ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಯೋಜನೆ ರೂಪಿಸಿದ್ದು, ಒಂದು ಅವಕಾಶ ನೀಡಿದರೆ ನಿಮ್ಮ ಋಣ ತೀರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಅಪ್ಪಾಜಣ್ಣನವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ್(btc), ಬೋಟಿ ಕೃಷ್ಣಣ್ಣ, ಚಂದ್ರಣ್ಣ, ರಾಜಣ್ಣ, ಅಂಕೇಶ್, ಸೋಮು, ಶಿವು, ಅಂಗಡಿ ಪ್ರಕಾಶಣ್ಣ, ಸ್ವಾಮಿ, ಸಿದ್ದು ಹಾಗೂ ಹಲವು ಬೂದನೂರು ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!