ಮಂಡ್ಯ ಧಾರ್ಮಿಕ ದತ್ತಿ ಇಲಾಖೆಯ ಆರಾಧನಾ ಯೋಜನೆಯ ಅನುಷ್ಠಾನಕ್ಕಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಆರಾಧನಾ ಸಮಿತಿ ರಚಿಸಿದ್ದು, ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ನಾಲ್ವರನ್ನು ನೇಮಕ ಮಾಡಲಾಗಿದೆ.
ಮಂಡ್ಯ ತಾಲೂಕು ಕೆರಗೋಡು ಹೋಬಳಿಯ ಆಲಕೆರೆ ಗ್ರಾಮದ ರೇವ ನಂಜುಂಡಸ್ವಾಮಿ, ಕೋಡಹಳ್ಳಿ ಗ್ರಾಮದ ಭಾಗ್ಯಮ್ಮ, ಹಲ್ಲೇಗೆರೆ ಗ್ರಾಮದ ಸಾಕಮ್ಮ ಹಾಗೂ ಬಸರಾಳು ಗ್ರಾಮದ ಮಾಯಿಗೌಡ ಅವರನ್ನು ನೇಮಕ ಮಾಡಿ ಧಾರ್ಮಿಕ ದತ್ತಿ ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಎಲ್.ವರಲಕ್ಷ್ಮಿ ಆದೇಶ ಹೊರಡಿಸಿದ್ದಾರೆ.