Thursday, September 19, 2024

ಪ್ರಾಯೋಗಿಕ ಆವೃತ್ತಿ

ಮುಸ್ಲಿಮರೊಂದಿಗೆ ಯತ್ನಾಳ್ ವ್ಯಾಪಾರ- ವ್ಯವಹಾರ; ಹೊರಗೆ ಬೂಟಾಟಿಕೆ: ಕಾಂಗ್ರೆಸ್ ಟೀಕೆ

ರಾಜಕೀಯ ಪಕ್ಷ ಬದಲಾದಂತೆ “ಹಿಂದೂ ಉಲಿ”ಯ ವೇಷವೂ ಬದಲಾಗುತ್ತದೆ! ಮುಸ್ಲಿಮರೊಂದಿಗೆ ವ್ಯಾಪಾರ, ವ್ಯವಹಾರ. ಮುಸ್ಲಿಮರೊಂದಿಗೆ ಬದುಕು. ಹೊರಗೆ ಮಾತ್ರ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಮುಸ್ಲಿಮರ ಮೇಲೆ ದ್ವೇಷ ಭಾಷಣ ಮಾಡುತ್ತಾರೆಂದು ಕಾಂಗ್ರೆಸ್ ಟೀಕಿಸಿದೆ. 

ಯತ್ನಾಳ್ ಅವರೇ, ಮುಸ್ಲಿಂ ಟೋಪಿಯಲ್ಲಿ ನೀವು ತುಂಬಾ ಚೆನ್ನಾಗಿ ಕಾಣ್ತಿದಿರಿ! ನೀವು ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿಕೊಂಡು, ಜನತೆಗೆ ದ್ವೇಷ ತುಂಬುವ ನಿಮ್ಮ ಬೂಟಾಟಿಕೆಯನ್ನು ಇನ್ನಾದರೂ ಬಿಡಿ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

“>

“ಯತ್ನಾಳ್ ಹೇಳಿದ್ದಕ್ಕೆ ಸಭಾತ್ಯಾಗ ಮಾಡಿದೆವು” ಎನ್ನುವ ಮೂಲಕ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕ ಯತ್ನಾಳ್ ಅವರೇ ಎಂದು ಆರ್. ಅಶೋಕ್ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ! ಬಿಜೆಪಿಯಲ್ಲಿ ಕೆಂಡದಂತಹ ಕಚ್ಚಾಟವಿದೆ ಎಂಬುದನ್ನೂ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಮಾತಿಗೆ ಮೂರು ಪೈಸೆ ಕಿಮ್ಮತ್ತಿಲ್ಲ ಎನ್ನುವುದು ಕೂಡ ಬಿಜೆಪಿಯ “ಸದನ ಕದನ”ದಿಂದ ಬಯಲಾಗಿದೆ. ಡಿಯರ್ ಬಿಜೆಪಿ, ನಿಮ್ಮದು “ಮನೆಯೊಂದು ಮೂರು ಬಾಗಿಲಲ್ಲ, ಮುನ್ನೂರು ಬಾಗಿಲು” ಅಲ್ಲವೇ! ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!