ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಡಾ ಕುರಿತು ಹೋರಾಟ ಮಾಡುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಹೊರಟಿರುವ ಹುನ್ನಾರ ಎಂದು ಬಿಜೆಪಿ ನಾಯಕ, ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಸ್ವಪಕ್ಷೀಯ ನಾಯಕನ ವಿರುದ್ದವೇ ಗುಡುಗಿದ್ಧಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮದಲ್ಲಿ ಮಾತನಾಡಿದ ಯತ್ನಾಳ್, ಡಿ.ಕೆ ಶಿವಕುಮಾರ್ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಮಾಡುತ್ತಿರುವ ಹೊಂದಾಣಿಕೆ ರಾಜಕಾರಣ ಪಾದಯಾತ್ರೆ, ಡಿ.ಕೆ ಶಿವಕುಮಾರ್ ಉಪಕಾರ ತೀರಿಸಲು ಹೋರಾಟ ಮಾಡ್ತಿದ್ದಾರೆ ಅಷ್ಟೇ ಎಂದಿದ್ದಾರೆ.