BSY ಅವರನ್ನೇ ಹೊರಗಿಟ್ಟು ಇತರೇ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದು ಲಿಂಗಾಯತ ಸಮುದಾಯದ ಹಿರಿಯ ನಾಯಕನಿಗೆ ಮಾಡಿದ ಘೋರ ಅವಮಾನ.
ಕರ್ನಾಟಕದಲ್ಲಿ ಬಿಜೆಪಿ ಕಟ್ಟಿದ BSY ಅವರಿಗೆ ಸಭೆಯಲ್ಲಿ ಕುರ್ಚಿ ಇರಲಿಲ್ಲವೇ @BJP4Karnataka?
ಟಿಕೆಟ್ ನಿರ್ಧರಿಸುವ ಸ್ವತಂತ್ರವಿಲ್ಲವೇ?BSY ಅವರು ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆ. pic.twitter.com/nvmefOvByr
— Karnataka Congress (@INCKarnataka) April 11, 2023
“>
BSY ಇರಬೇಕಾದ ಜಾಗದಲ್ಲಿ ಪ್ರಯತ್ನಪೂರ್ವಕವಾಗಿ ಪ್ರಹ್ಲಾದ್ ಜೋಷಿಯನ್ನು ತಂದು ಕೂರಿಸುತ್ತಿದೆ ಬಿಜೆಪಿ. ಟಿಕೆಟ್ ಹಂಚಿಕೆಯ ಸಭೆಯಲ್ಲಿ BSYರ ಮಾತಿಗೆ ಮನ್ನಣೆ ಕೊಡುವುದಿರಲಿ ಕನಿಷ್ಠ ಹಾಜರಿಗೂ ಅವಕಾಶ ಕೊಡಲಿಲ್ಲ. BSYರಿಗೆ ನಿರಂತರ ಅವಮಾನ ಮಾಡಿದ ಬಿಜೆಪಿ ಅವರನ್ನು ಡಸ್ಟ್ಬಿನ್ನಲ್ಲಿ ಬಿದ್ದಿರುವ ಕಸದಂತೆ ನಡೆಸಿಕೊಳ್ಳುತ್ತಿದೆ.
ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ಸ್ಥಿತಿ! pic.twitter.com/s20k6ltLex
— Pavithra Gowda (@PaviGowda123) April 11, 2023
“>
ಅಭ್ಯರ್ಥಿಗಳ ಕನಿಷ್ಠ ಒಂದು ಪಟ್ಟಿಯನ್ನೂ ಬಿಡುಗಡೆ ಮಾಡದಷ್ಟು ಬಿಜೆಪಿ ಅಸಮರ್ಥವಾಗಿದೆ. ಪಕ್ಷದ ಅಧ್ಯಕ್ಷರನ್ನು ಬಿಟ್ಟು ಕೇಂದ್ರ ಗೃಹಸಚಿವ ಅಮಿತ್ ಶಾ ಏಕೆ ಟಿಕೆಟ್ ನೀಡುವ ಉಸಾಬರಿಗೆ ಬಂದಿದ್ದು? ಬಿಜೆಪಿಯ ರಾಷ್ಟ್ರೀಯ ನಾಮಕಾವಸ್ಥೆ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಯಾವುದೇ ಸ್ವತಂತ್ರವಿಲ್ಲದ್ದು ಬಿಜೆಪಿಯ ಸರ್ವಾಧಿಕಾರಕ್ಕೆ ನಿದರ್ಶನ ಎಂದು ಕಾಂಗ್ರೆಸ್ ಟೀಕಿಸಿದೆ.