ಮಂಡ್ಯದ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ವೈ.ಕೆ.ಭಾಗ್ಯ ಅವರು ಸಮಾಜಶಾಸ್ತ್ರ ವಿಷಯದಲ್ಲಿ ಸಾದರಪಡಿಸಿದ ”ಸರ್ಕಾರಿ ಆಸ್ಪತ್ರೆಗಳಲ್ಲಿನ ದಾದಿಯರು – ಒಂದು ಸಮಾಜಶಾಸ್ತ್ರೀಯ ಅಧ್ಯಯನ” ಮಂಡ್ಯ ಜಿಲ್ಲೆಗೆ ಸಂಬಂಧಿಸಿದಂತೆ ಎಂಬ ಮಹಾ ಪ್ರಬಂಧವನ್ನು ಮೈಸೂರು ವಿಶ್ವವಿದ್ಯಾನಿಲಯ ಪಿಹೆಚ್ಡಿ ಪದವಿಗೆ ಅಂಗೀಕರಿಸಿದೆ.
ಡಾ.ರೇಖಾ ಕೆ.ಜಾಧವ್ ಅವರ ಮಾರ್ಗದರ್ಶನದಲ್ಲಿ ಭಾಗ್ಯ ಅವರು ಪ್ರಬಂಧ ಮಂಡಿಸಿದ್ದರು.
ಮುಂಬರುವ ಘಟಿಕೋತ್ಸವದಲ್ಲಿ ವೈ.ಕೆ. ಭಾಗ್ಯ ಅವರಿಗೆ ಪಿಹೆಚ್ಡಿ ಪದವಿ ನೀಡಿ ಗೌರವಿಸಲಾಗುವುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಪ್ರೋ.ಕೆ.ಎಂ. ಮಹದೇವನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೈ.ಕೆ.ಭಾಗ್ಯ ಅವರು ಮಂಡ್ಯ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಹಲವು ವರ್ಷಗಳಿಂದ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಬನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದಾರೆ.