ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಿಪಿ ಯೋಗೇಶ್ವರ್ ಅವರಿಗೆ ಬಿಜೆಪಿ ಹಿರಿಯ ನಾಯಕ ಸಿಟಿ ರವಿ ಅವರ ಸಹಕಾರ ಇದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಪರೋಕ್ಷವಾಗಿ ಬಿಜೆಪಿಯ ಒಡಕಿನ ಬಗ್ಗೆ ತಿಳಿಸಿದರು.
ಸಿಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆ ಆದ ವಿಚಾರವಾಗಿ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಾನು ಬಿಜೆಪಿ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಬಿಜೆಪಿ ಬಗ್ಗೆ ವಿಶ್ಲೇಷಣೆ ಮಾಡಲ್ಲ, ಸಿಟಿ ರವಿ ಸಹಕಾರ ಯೋಗೇಶ್ವರ್ ಗೆ ಇದೆ ಪುನರುಚ್ಛರಿಸಿದರು.
ಯೋಗೇಶ್ವರ್ ಸ್ಪರ್ಧೆಗೆ ಕೈ ಕಾರ್ಯಕರ್ತರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕ್ಷೇತ್ರದಲ್ಲಿ ಒಬ್ಬರದ್ದು ಒಂದೊಂದು ಅಭಿಪ್ರಾಯ ಇರುತ್ತದೆ. ಪಕ್ಷ ತೆಗೆದುಕೊಂಡ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕಾಗುತ್ತದೆ. ನಾನು ರಾಮನಗರ ಜಿಲ್ಲೆಗೆ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸುವ ಕಾರ್ಯ್ರಕಮಕ್ಕೆ ಹೋಗುತ್ತಿದ್ದೇವೆ. ನಾಮಪತ್ರ ಸಲ್ಲಿಕೆ ಬಳಿಕ ಎಲ್ಲರನ್ನೂ ಕರೆದು ಸಭೆ ಮಾಡುತ್ತೇವೆ ಎಂದರು.