Friday, September 20, 2024

ಪ್ರಾಯೋಗಿಕ ಆವೃತ್ತಿ

ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಅಧಿಕಾರ ನೀಡಿ – ಜಫ್ರುಲ್ಲಾ ಖಾನ್

ಕಾಂಗ್ರೆಸ್, ಬಿಜೆಪಿ ಪಕ್ಷಗಳನ್ನು ತಿರಸ್ಕರಿಸಿ ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ ನೀಡಿ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಜಫ್ರುಲ್ಲಾ ಖಾನ್ ಹೇಳಿದರು.

ಮಳವಳ್ಳಿ ಪಟ್ಟಣದ ಮುಸ್ಲಿಂ ಬ್ಲಾಕ್ ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಬಿಜೆಪಿ
ಪಕ್ಷಗಳನ್ನು ತಿರಸ್ಕರಿಸಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಡಾ.ಕೆ ಅನ್ನದಾನಿ ಅವರನ್ನು ಶಾಸಕರನ್ನಾಗಿ ಮಾಡಿಕೊಡಬೇಕೆಂದು ಮುಸ್ಲಿಂ ಬಾಂಧವರಲ್ಲಿ ಮತಯಾಚನೆ ಮಾಡಿದರು. ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಹೊಣೆ ನಿಮ್ಮದು ಎಂದು ಹೇಳಿದರು.

ಜೆಡಿಎಸ್ ಅಭ್ಯರ್ಥಿ ಡಾ.ಕೆ.ಅನ್ನದಾನಿ ಮಾತನಾಡಿ, ಶಾಸಕನಾದ ಬಳಿಕ ಬೀಡಿ ಕಾರ್ಮಿಕರಿಗೆ ವಸತಿ ನಿರ್ಮಾಣ ಯೋಜನೆಯನ್ನು ಮಾಡಿಕೊಡುವೆ, ಈಗಾಗಲೇ ಮುಸ್ಲಿಂ ಬಾಂಧವರಿಗೆ ನಿವೇಶನ ಹಂಚಿಕೆ ಸಂದರ್ಭದಲ್ಲಿ ಹಕ್ಕು ಪತ್ರಗಳನ್ನು ನೀಡಿದ್ದೇವೆ. ಮತ್ತೊಮ್ಮೆ ಶಾಸಕನಾಗಲು ನಿಮ್ಮ ಆಶೀರ್ವಾದ ಬೇಕು ಎಂದು ಮತಯಾಚನೆ ಮಾಡಿದರು .

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಅವರು ಹಲಗೂರು ಹೋಬಳಿ, ಬಿ.ಜಿ.ಪುರ ಹೋಬಳಿ, ಕಿರುಗಾವಲು, ಮಳವಳ್ಳಿ ಪಟ್ಟಣದ ಮಸೀದಿಗಳಿಗೆ ಜೆಡಿಎಸ್ ಅಭ್ಯರ್ಥಿಅನ್ನದಾನಿ ಅವರೊಂದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷ ಜಯರಾಮು, ಪುರಸಭೆ ಸದಸ್ಯ ನಂದಕುಮಾರ್. ನೂರುಲ್ಲಾ, ಜೆಡಿಎಸ್ ಮುಖಂಡರಾದ ಅಕ್ಕಿ ಶಿವಣ್ಣ, ಪೋತ್ತಂಡೆ ನಾಗರಾಜು, ಪುರಸಭೆ ಮಾಜಿ ಸದಸ್ಯ ಮೋಹಬಬ್, ನಾಜಿಮ್ ಸೇರಿಂದರೆ ಹಲವರು ಪಾಲ್ಗೊಂಡಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!